ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತುರ್ತು ವಿಚಾರಣೆಗೆ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಈ ವಿಚಾರದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪೀಠ ಹೇಳಿದೆ.
ಇದನ್ನೂ ಓದಿ: ಭಾರತದಲ್ಲಿ ವ್ಯಾಟ್ಸಪ್ ಬಂದ್ ಆಗುತ್ತದೆಯೇ?
ಕೇಜ್ರಿವಾಲ್ ಅವರು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ನೆವಿಗೆ ಮಾಡಿ ಜಾಮೀನು ವಿಸ್ತರಣೆಗೆ ಅರ್ಜಿ ಸಲ್ಲಿಸಿದ್ದರು.ಆದರೆ, ಸುಪ್ರೀಂಕೋರ್ಟ್ ಈ ಕುರಿತು ತುರ್ತು ವಿಚಾರಣೆಗೆ ಅವಕಾಶ ನೀಡದೇ, ಈ ಅರ್ಜಿಯನ್ನು ಕ್ರಮಬದ್ಧ ವಿಚಾರಣೆಯಂತೆ ಮುಂದಿನ ದಿನಗಳಲ್ಲೇ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. ತಾವು ಜೂನ್ 2ಕ್ಕೆ ಬದಲಾಗಿ ಜೂನ್ 9 ರಂದು ಜೈಲು ಅಧಿಕಾರಿಗಳ ಮುಂದೆ ಶರಣಾಗುತ್ತೇನೆ.
ಇದನ್ನೂ ಓದಿ: NCB Recruitment: ಸಬ್ ಇನ್ಸೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಸದ್ಯ ಮ್ಯಾಕ್ಸ್ ಆಸ್ಪತ್ರೆ ವೈದ್ಯರು ತಮಗೆ ಚಿಕಿತ್ಸೆ ನೀಡುತ್ತಿದ್ದಾರೆ. 7 ಹಂತದ ಚುನಾವಣೆಯ ಮತದಾನ ಮುಗಿದ ಒಂದು ದಿನದ ನಂತರ ಜೂನ್ 2 ರಂದು ಕೇಜ್ರಿವಾಲ್ ಅವರು ಜೈಲು ಅಧಿಕಾರಿಗಳ ಮುಂದೆ ಶರಣಾಗಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿತ್ತು. ಹೀಗಾಗಿ ಸ್ವಲ್ಪ ಸಮಯವನ್ನು ತೆಗೆದುಕೊಂಡಿತು ಎಂದು ಹೇಳಿದರು. ಅದಾಗ್ಯೂ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆಗೊಂಡಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಕೋರ್ಟ್ ಮತ್ತು ತಜ್ಞ ವೈದ್ಯರಿಂದ ಮಾಹಿತಿ ಪಡೆಯಲು ಸುಪ್ರೀಂಕೋರ್ಟ್ ಸೂಚಿಸಿದೆ.
2024-05-28