V Somanna : ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ

ಬೆಂಗಳೂರು: ರಾಜ್ಯದಲ್ಲಿ ಜೋರು ಮಳೆಯ ನಡುವೆ ಆಗಸ್ಟ್ ತಿಂಗಳು ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳನ್ನು ನಿಯೋಜಿಸಲಾಗಿದ್ದು, ಬೆಂಗಳೂರು ಮತ್ತು ಈ ಪ್ರದೇಶಗಳ ನಡುವಿನ ಸಂಪರ್ಕವನ್ನು ಕಲ್ಪಿಸಲು ಪ್ರಯತ್ನಿಸಲಾಗಿದೆ ಎಂದು ರೈಲ್ವೆ ಖಾತೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ (V Somanna) ತಿಳಿಸಿದ್ದಾರೆ.
ಇದನ್ನೂ ಓದಿ: Wayanad Landslide : ಸಂತ್ರಸ್ತರಿಗೆ ಕಾಂಗ್ರೆಸ್‌ನಿಂದ 100 ಮನೆ ನಿರ್ಮಾಣ: ರಾಹುಲ್‌ ಗಾಂಧಿ

ಪ್ರಯಾಣಿಕರ ಜನಸಂದಣಿಯನ್ನು ತಪ್ಪಿಸಲು ಮತ್ತು ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನಿಂದ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ. ಸಚಿವ ವಿ. ಸೋಮಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಾದ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ವಿಶೇಷ ರೈಲುಗಳು ಬೆಂಗಳೂರಿನಿಂದ ಯಶವಂತಪುರ, ಬೆಳಗಾವಿ, ಹುಬ್ಬಳ್ಳಿ, ವಿಜಯಪುರ, ಕಲಬುರಗಿಗೆ ಸಂಚರಿಸಲಿವೆ.

ವಿಶೇಷ ರೈಲುಗಳ ಪಟ್ಟಿ:

ರೈಲು ಸಂಖ್ಯೆ 07313: ಆಗಸ್ಟ್ 13ರಂದು ಹುಬ್ಬಳ್ಳಿಯಿಂದ ಹೊರಟು ಯಶವಂತಪುರ ತಲುಪಲಿದೆ.

ರೈಲು ಸಂಖ್ಯೆ 07307: ಆಗಸ್ಟ್ 14ರಂದು ಯಶವಂತಪುರದಿಂದ ಹೊರಟು ಬೆಳಗಾವಿಗೆ ತಲುಪಲಿದೆ.

ರೈಲು ಸಂಖ್ಯೆ 07308: ಆಗಸ್ಟ್ 15ರಂದು ಬೆಳಗಾವಿಯಿಂದ ಹೊರಟು ಯಶವಂತಪುರ ತಲುಪಲಿದೆ.

ರೈಲು ಸಂಖ್ಯೆ 07391: ಆಗಸ್ಟ್ 16ರಂದು ಯಶವಂತಪುರದಿಂದ ಬೆಳಗಾವಿಗೆ ತಲುಪಲಿದೆ.

ಈ ಜೊತೆಗೆ, ಯಾದಗಿರಿ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯೊಂದಿಗೆ ರೈಲು ಸಂಖ್ಯೆ 22232 ಎಸ್ ಎಮ್ ವಿ ಟಿ ಬೆಂಗಳೂರು – ಕಲಬುರಗಿ ವಂದೇ ಭಾರತ್ ಎಕ್ಸ್’ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಲಾಗಿದೆ.

Leave a Reply

Your email address will not be published. Required fields are marked *