ನವದೆಹಲಿ: ನಾಳೆ ಬುಧವಾರ (ಆಗಸ್ಟ್ 21) ದೇಶಾದ್ಯಂತ ಭಾರತ್ ಬಂದ್ಗೆ (Bharat Bandh) ಕರೆ ನೀಡಿರುವ ಮೀಸಲಾತಿ ಬಚಾವೋ ಸಂಘರ್ಷ ಸಮಿತಿಯು, ಸುಪ್ರೀಂ ಕೋರ್ಟ್ (Supreme Court) ತೀರ್ಪಿನ ವಿರುದ್ಧ ಪ್ರತಿಭಟನೆಯು, ಪರಿಶಿಷ್ಟ ಜಾತಿಗಳು (SC) ಮತ್ತು ಪರಿಶಿಷ್ಟ ಪಂಗಡಗಳು (ST) ಒಳಗೆ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಅನುಮತಿ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧವಾಗಿ ನಡೆಯುತ್ತಿದೆ.
ಇದನ್ನೂ ಓದಿ: BSNL ಅಕ್ಟೋಬರ್ನಿಂದ ದೇಶಾದ್ಯಂತ 4G ಸೇವೆಗಳು ಪ್ರಾರಂಭ
ಉತ್ತರ ಭಾರತದಲ್ಲಿ ಬಂದ್ ಸಮಯದಲ್ಲಿ ಹಿಂಸಾಚಾರವನ್ನು ತಪ್ಪಿಸಲು, ಹಿರಿಯ ನಾಗರಿಕ ಮತ್ತು ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ. ತುರ್ತು ಸೇವೆಗಳು, ಆಂಬ್ಯುಲೆನ್ಸ್, ಆಸ್ಪತ್ರೆಗಳು, ವೈದ್ಯಕೀಯ ಸೇವೆಗಳು, ಮತ್ತು ಅಗತ್ಯ ಔಷಧಿಗಳನ್ನು ಒದಗಿಸಲು ಫಾರ್ಮಸಿಗಳು ತೆರೆದಿರುತ್ತವೆ. ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು, ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಎಂದು ವರದಿಗಳು ಸೂಚಿಸಿವೆ.
ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸುವಂತೆ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸುವಂತೆ ಸೂಚಿಸಲಾಗಿದೆ. ಮುಖ್ಯವಾಗಿ ಉತ್ತರ ಪ್ರದೇಶ ಸೇರಿದಂತೆ ಕೆಲವು ಉತ್ತರ ರಾಜ್ಯಗಳಲ್ಲಿ ಹೋರಾಟ ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ತೀವ್ರ ಕಟ್ಟೆಚ್ಚರ ವಹಿಸಲು ಆದೇಶಿಸಲಾಗಿದೆ.