ಮುಂಗಾರು ಅಧಿವೇಶನದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹ: ಶಾಸಕ ವಿಜಯಾನಂದ ಕಾಶಪ್ಪನವರ

Bagalkot, ಇಳಕಲ್: ಲಿಂಗಾಯತ ಪಂಚಮಸಾಲಿ ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ, ಮತ್ತು ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳಿಗೆ ಓಬಿಸಿ ಮೀಸಲಾತಿ ನೀಡುವಂತೆ ಹೋರಾಟ ಮಾಡುತ್ತೇನೆ ಎಂದು ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕರಾದ ವಿಜಯಾನಂದ ಎಸ್. ಕಾಶಪ್ಪನವರ ಅವರು ಹೇಳಿದರು. ಇದನ್ನೂ ಓದಿ: ಜಿಲ್ಲಾಧಿಕಾರಿಗಳು ಮಹಾರಾಜರಂತೆ ಆಡಳಿತ ನಡೆಸಿದರೆ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ

ಕೂಡಲಸಂಗಮದ ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳು ಬುಧವಾರ ರಾತ್ರಿ ಶಾಸಕ ಕಾಶಪ್ಪನವರ ಅವರ ನಿವಾಸಕ್ಕೆ ಭೇಟಿ ನೀಡಿ, ರಾಜ್ಯ ಸರ್ಕಾರದ ಮುಂಗಾರು ಅಧಿವೇಶನದಲ್ಲಿ ಮೀಸಲಾತಿ ಪರ ಚರ್ಚೆ ಮಾಡಲು ಆಗ್ರಹ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ನಾವು ಈಗಾಗಲೇ ಮಾತುಕತೆ ನಡೆಸಿದ್ದೇವೆ. ಅವರು ಹಿಂದುಳಿದ ಆಯೋಗದ ವರದಿ ಆಧರಿಸಿ ಕಾನೂನು ಅಡಿಯಲ್ಲಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿದರು. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ

ಪಂಚಮಸಾಲಿ ಸಮುದಾಯದ ಮೀಸಲಾತಿಯ ವಿಷಯದಲ್ಲಿ ನಾನು ಖಂಡಿತ ಸದನದಲ್ಲಿ ಧ್ವನಿ ಎತ್ತುತ್ತೇನೆ. ಆದೇಶ ಪತ್ರ ಬರುವವರೆಗೂ ಹೋರಾಟ ನಿರಂತರವಾಗಿರುತ್ತದೆ” ಎಂದು ಅವರು ಹೇಳಿದರು. ಜಗದ್ಗುರು ಬಸವ ಜಯ ಮೃತ್ಯುಂಜಯ ಶ್ರೀಗಳು, ಶಾಸಕ ವಿಜಯಾನಂದ ಕಾಶಪ್ಪನವರು ಪಂಚಮಸಾಲಿ ಸಮುದಾಯದ ಸಂಘಟನೆಗಾಗಿ ಮಹತ್ವದ ಪಾತ್ರ ವಹಿಸಿದ್ದಾರೆ. ನಮ್ಮ ಬೇಡಿಕೆ ಅನ್ಯ ಸಮುದಾಯಗಳಿಗೆ ವಿರುದ್ಧವಲ್ಲ, ಶೈಕ್ಷಣಿಕವಾಗಿ ಹಿಂದುಳಿದಿರುವ ನಮ್ಮ ಸಮುದಾಯಕ್ಕೆ ಮೀಸಲಾತಿ ಅಗತ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ, ಇಳಕಲ್ ತಾಲೂಕ ಪಂಚಮಸಾಲಿ ಘಟಕದ ಪ್ರಧಾನ ಕಾರ್ಯದರ್ಶಿ ಹುಚ್ಚಪ್ಪ ಐಹೊಳ್ಳಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಮಹಾಂತೇಶ ನರಗುಂದ, ಬಾಗಲಕೋಟೆ ಜಿಲ್ಲಾ ಪಂಚಮಸಾಲಿ ಮಹಿಳಾ ಘಟಕದ ಅಧ್ಯಕ್ಷೆ ನಿಂಗಮ್ಮ ಬೇವೂರ, ಇಳಕಲ್ ತಾಲೂಕ ಅಧ್ಯಕ್ಷೆ ಶಿಲ್ಪಾ ನರಗುಂದ, ಅಕ್ಕಮ್ಮ ಪಾಟೀಲ, ಸುಮಾಶೀಲವಂತ ಮತ್ತು ಸಮಾಜದ ಅನೇಕ ಸದಸ್ಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *