ರಾಯಚೂರು: ಶಾಲಾ ವಾಹನ ಮತ್ತು ಬಸ್ ಮುಖಾಮುಖಿ ಡಿಕ್ಕಿ, 2 ಮಕ್ಕಳು ದುರ್ಮರಣ, 15 ವಿದ್ಯಾರ್ಥಿಗಳು ಗಾಯ

ರಾಯಚೂರು: ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಸಮೀಪ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ವಾಹನ ಹಾಗೂ ಕೆಎಸ್​ಆರ್​ಟಿಸಿ ಬಸ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ, ಇಬ್ಬರು ಶಾಲಾ ಮಕ್ಕಳು ಸಾವನ್ನಪ್ಪಿದ್ದು, 15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಆಗಾಗ ವಿದೇಶಕ್ಕೆ ಮೋದಿಯವರ ಪ್ರವಾಸ, ಮಣಿಪುರಕ್ಕೆ ಯಾವಾಗ ಭೇಟಿ: ಜೈರಾಮ್‌ ರಮೇಶ್‌

ಮೃತ ಮಕ್ಕಳು ಲೊಯಲ್‌ ಶಾಲೆಯ ಸಮರ್ಥ ಅಮರೇಶ (7) ಮತ್ತು ಶ್ರೀಕಾಂತ ಮಾರೇಶ (12) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಒಬ್ಬ ಬಾಲಕ ಮತ್ತು ಚಾಲಕನ ಸ್ಥಿತಿ ಗಂಭೀರವಾಗಿದೆ. ಬಲವಾದ ಅಪಘಾತದಿಂದ ಮೂರು ಮಕ್ಕಳ ಕಾಲುಗಳು ತುಂಡಾಗಿರುವ ದುರ್ಘಟನೆ ಸಂಭವಿಸಿದೆ.

ಶಾಲಾ ವಾಹನವು ಮಕ್ಕಳನ್ನು ಲೊಯಲ್ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಾಗ, ಮಾನ್ವಿಯಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್‌ ಡಿಕ್ಕಿಯಾಗಿದೆ. ತೀವ್ರ ಗಾಯಗೊಂಡ ಮಕ್ಕಳನ್ನು ತಕ್ಷಣವೇ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲಾಧಿಕಾರಿ ನಿತಿಶ್ ಕೆ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳು ಮಕ್ಕಳ ಆರೋಗ್ಯ ವಿಚಾರಿಸಿ, ಮೃತ ಮಕ್ಕಳ ಕುಟುಂಬಗಳಿಗೆ ಸಾಂತ್ವನ ಹೇಳಿ, ಅವರ ಪಾಲಕರಿಗೆ ತಲಾ ₹5 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *