Rajnath Singh: ಜಮ್ಮು & ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಹತ್ವದ ಸಭೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳ ಹೆಚ್ಚಳದ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.
ಇದನ್ನೂ ಓದಿ: 7ನೇ ವೇತನ ಆಯೋಗದ ಜಾರಿ: ಸರ್ಕಾರದ ನಿರ್ಧಾರಕ್ಕೆ ಸಂಕಷ್ಟ ಅಡ್ಡಿ, ಖಾಲಿ ಹುದ್ದೆಗಳ ಭರ್ತಿಯಲ್ಲಿ ತೊಂದರೆ

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಅನಂತನಾಗ್‌ ಜಿಲ್ಲೆಯಲ್ಲಿ ಆಗಸ್ಟ್ 10ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಸೈನಿಕರು ಮತ್ತು ನಾಗರಿಕರೊಬ್ಬರು ಮೃತಪಟ್ಟಿದ್ದರು. ಜುಲೈ ತಿಂಗಳಲ್ಲಿ ಕಠುವಾ ಜಿಲ್ಲೆಯಲ್ಲಿ ಉಗ್ರರು ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದು, ಇದರಲ್ಲಿ ಗಾಯಗೊಂಡ 10 ಯೋಧರಲ್ಲಿ ಐವರು ಮೃತಪಟ್ಟಿದ್ದರು. ದೋಡಾ ಮತ್ತು ಉಧಂಪುರ ಜಿಲ್ಲೆಗಳಲ್ಲಿ ಹೆಚ್ಚಿನ ಭಯೋತ್ಪಾದಕ ದಾಳಿ ಪ್ರಕರಣಗಳು ವರದಿಯಾಗಿವೆ.

2024ರ ಜುಲೈ 21ರವರೆಗೆ 11 ಭಯೋತ್ಪಾದಕ ದಾಳಿಗಳು ನಡೆದಿದ್ದು, ಈ ದಾಳಿಗಳಲ್ಲಿ 28 ಮಂದಿ, ಅವರಲ್ಲಿ ನಾಗರಿಕರು ಮತ್ತು ಭದ್ರತಾ ಸಿಬ್ಬಂದಿ ಸೇರಿ, ಮೃತಪಟ್ಟಿದ್ದಾರೆ ಎಂದು ಗೃಹ ಸಚಿವಾಲಯವು ಲೋಕಸಭೆಗೆ ಮಾಹಿತಿ ನೀಡಿತ್ತು.

ಈ ಸಭೆಯಲ್ಲಿ ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮನೆ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋಭಾಲ್, ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ, ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಪ್ರತೀಕ್ ಶರ್ಮಾ ಮತ್ತು ವಿವಿಧ ಭದ್ರತಾ ಏಜೆನ್ಸಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *