ಬೆಂಗಳೂರು: ರಾಜ್ಯದಲ್ಲಿ ಜೋರು ಮಳೆಯ ನಡುವೆ ಆಗಸ್ಟ್ ತಿಂಗಳು ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳನ್ನು ನಿಯೋಜಿಸಲಾಗಿದ್ದು, ಬೆಂಗಳೂರು ಮತ್ತು ಈ ಪ್ರದೇಶಗಳ ನಡುವಿನ ಸಂಪರ್ಕವನ್ನು ಕಲ್ಪಿಸಲು ಪ್ರಯತ್ನಿಸಲಾಗಿದೆ ಎಂದು ರೈಲ್ವೆ ಖಾತೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ (V Somanna) ತಿಳಿಸಿದ್ದಾರೆ.
ಇದನ್ನೂ ಓದಿ: Wayanad Landslide : ಸಂತ್ರಸ್ತರಿಗೆ ಕಾಂಗ್ರೆಸ್ನಿಂದ 100 ಮನೆ ನಿರ್ಮಾಣ: ರಾಹುಲ್ ಗಾಂಧಿ
ಪ್ರಯಾಣಿಕರ ಜನಸಂದಣಿಯನ್ನು ತಪ್ಪಿಸಲು ಮತ್ತು ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನಿಂದ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ. ಸಚಿವ ವಿ. ಸೋಮಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಾದ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ವಿಶೇಷ ರೈಲುಗಳು ಬೆಂಗಳೂರಿನಿಂದ ಯಶವಂತಪುರ, ಬೆಳಗಾವಿ, ಹುಬ್ಬಳ್ಳಿ, ವಿಜಯಪುರ, ಕಲಬುರಗಿಗೆ ಸಂಚರಿಸಲಿವೆ.
ವಿಶೇಷ ರೈಲುಗಳ ಪಟ್ಟಿ:
ರೈಲು ಸಂಖ್ಯೆ 07313: ಆಗಸ್ಟ್ 13ರಂದು ಹುಬ್ಬಳ್ಳಿಯಿಂದ ಹೊರಟು ಯಶವಂತಪುರ ತಲುಪಲಿದೆ.
ರೈಲು ಸಂಖ್ಯೆ 07307: ಆಗಸ್ಟ್ 14ರಂದು ಯಶವಂತಪುರದಿಂದ ಹೊರಟು ಬೆಳಗಾವಿಗೆ ತಲುಪಲಿದೆ.
ರೈಲು ಸಂಖ್ಯೆ 07308: ಆಗಸ್ಟ್ 15ರಂದು ಬೆಳಗಾವಿಯಿಂದ ಹೊರಟು ಯಶವಂತಪುರ ತಲುಪಲಿದೆ.
ರೈಲು ಸಂಖ್ಯೆ 07391: ಆಗಸ್ಟ್ 16ರಂದು ಯಶವಂತಪುರದಿಂದ ಬೆಳಗಾವಿಗೆ ತಲುಪಲಿದೆ.
ಈ ಜೊತೆಗೆ, ಯಾದಗಿರಿ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯೊಂದಿಗೆ ರೈಲು ಸಂಖ್ಯೆ 22232 ಎಸ್ ಎಮ್ ವಿ ಟಿ ಬೆಂಗಳೂರು – ಕಲಬುರಗಿ ವಂದೇ ಭಾರತ್ ಎಕ್ಸ್’ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಲಾಗಿದೆ.
Making travel easier for everyone!
— V. Somanna (@VSOMANNA_BJP) August 5, 2024
Special Trains will be run to various destinations in north Karnataka and Kalyana Karnataka connecting Bengaluru during the peak travel season in August. We are committed to making the Indian railway system accessible for all. We encourage you… pic.twitter.com/mui9Ao147N