ಚೆನ್ನೈ: ನಟ ಮತ್ತು ರಾಜಕಾರಣಿ ವಿಜಯ್ ಅವರು ಹೊಸ ರಾಜಕೀಯ ಪಕ್ಷ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸ್ಥಾಪಿಸಿರುವುದು ರಾಜ್ಯದ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಅವರು (Vijay TVK flag) ಇತ್ತೀಚೆಗೆ ತಮ್ಮ ಪಕ್ಷದ ಧ್ವಜವನ್ನು ಅನಾವರಣ ಮಾಡಿದ್ದು, ಇದರ ಬಗ್ಗೆ ತಮಿಳುನಾಡು ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ವಿಜಯ್ ಅವರ ಧ್ವಜದಲ್ಲಿ ಆನೆಗಳ ಚಿಹ್ನೆ ಬಳಸಿರುವುದನ್ನು ಪ್ರಶ್ನಿಸಿ, ತಮಿಳುನಾಡು ಬಿಎಸ್ಪಿ ಅಧ್ಯಕ್ಷ ಆನಂದ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಅವರ ಪ್ರಕಾರ, ಆನೆ ಗುರುತು ಬಿಎಸ್ಪಿ ಪಕ್ಷದದ್ದಾಗಿದ್ದು, ಇದು ಕೇಂದ್ರೀಯ ರಾಷ್ಟ್ರೀಯ ಪಕ್ಷಕ್ಕೆ ಮೀಸಲಾಗಿರುವ ಚಿಹ್ನೆಯಾಗಿದೆಯೆಂದು ಅವರು ತಿಳಿಸಿದ್ದಾರೆ. ಈ ಪ್ರಕರಣವು ಮುಂದಿನ ದಿನಗಳಲ್ಲಿ ತಮಿಳುನಾಡು ರಾಜಕಾರಣದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.